ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…