ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…