ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…