Opinion

ಸಬ್ಬಸಿಗೆ ಸೊಪ್ಪು ಕೇವಲ ಸಾಂಬಾರು, ಪಲ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾನೆ ಉಪಕಾರಿ | ಇದು ಯಾವೆಲ್ಲಾ ಸಮಸ್ಯೆಗಳಿಗೆ ರಾಮಬಾಣ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಬ್ಬಸಿಗೆ ಸೊಪ್ಪು(Dill Leaves) ಹಸಿರು ತರಕಾರಿಗಳಲ್ಲಿ(Green vegetable) ವಿಭಿನ್ನವಾಗಿದೆ. ಇದು ಕೆಲವರಿಗೆ ಪರಿಚಿತವಾದ ಸೊಪ್ಪಾಗಿದೆ. ಸಬ್ಬಸಿಗೆ ಸೊಪ್ಪಿನ ಪ್ರತಿ ಭಾಗವು ಪರಿಮಳದಿಂದ(Aroma) ಕೂಡಿರುತ್ತದೆ. ಆದ್ದರಿಂದ ಇದು ಕೆಲವರಿಗೆ ಇಷ್ಟವಾಗುವುದಿಲ್ಲ. ಈ ಸಬ್ಬಸಿಗೆ ಸೊಪ್ಪನ್ನು ಸಾಂಬಾರು, ಪಲ್ಯ, ಪಲಾವ್ ಗಳಲ್ಲಿ ಪರಿಮಳಕ್ಕಾಗಿ ಬಳಸುತ್ತಾರೆ. ಈ ಸೊಪ್ಪಿನಿಂದ ಇನ್ನೂ ನಾನಾ ತರಹದ ಅಡುಗೆಗಳನ್ನು ತಯಾರಿಸುತ್ತಾರೆ. ಹಾಗು ಸಬ್ಬಸಿಗೆ ಬೀಜಗಳನ್ನು ಸಾಂಬಾರಿನಲ್ಲಿ ಬಳಸುತ್ತಾರೆ.

Advertisement
ಸಬ್ಬಸಿಗೆ ಸೊಪ್ಪು ನಿದ್ರಾಹೀನತೆಯನ್ನು(Insomnia) ನಿವಾರಿಸುತ್ತದೆ. ನಿದ್ರಾ ಹೀನತೆಯಿಂದ ಬಳಲುತ್ತಿದ್ದವರು ಪ್ರತಿನಿತ್ಯ ಆಹಾರದಲ್ಲಿ ಸಬ್ಬಸಿಗೆ ಸೊಪ್ಪಿನ ಉಪಯೋಗ ಮಾಡುವುದರಿಂದ ನಿದ್ರೆಯ ಸಮಸ್ಯೆ ಉಂಟಾಗುವುದಿಲ್ಲ.
ಸಬ್ಬಸಿಗೆ ಸೊಪ್ಪು ಜೀರ್ಣಕ್ರಿಯೆಗೆ(Digestion) ಸಹಕಾರಿಯಾಗಿದೆ. ಸಬ್ಬಸಿಗೆ ಸೊಪ್ಪಿನ ಜೊತೆ ಮೆಂತೆ ಸೇರಿಸಿ, ತುಪ್ಪದಲ್ಲಿ ಹುರಿದು, ಅದಕ್ಕೆ ಒಣ ಮೆಣಸು, ಕಾಯಿ ತುರಿ, ಉಪ್ಪು, ಸಾಸಿವೆ ಸೇರಿಸಿ ಚಟ್ನೆಪುಡಿ ಮಾಡಿಕೊಂಡು ಅನ್ನದ ಜೊತೆ, ಮಜ್ಜಿಗೆ ಮತ್ತು ಈ ಚಟ್ನಿಪುಡಿಯನ್ನು ಸೇರಿಸಿ, ಊಟ ಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ.

ಮಧುಮೇಹ(diabetes) ನಿಯಂತ್ರಣಕ್ಕೆ ಸಬ್ಬಸಿಗೆ ಸೊಪ್ಪು. ಮಧುಮೇಹ ರೋಗಿಗಳು ಸಬ್ಬಸಿಗೆ ಸೊಪ್ಪನ್ನು ಬಳಸುವುದರಿಂದ, ಇದು ರಕ್ತದಲ್ಲಿ ಸಕ್ಕೆರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಹಾಗು ಇನ್ಸುಲಿನ್ ನು ನಿಯಮಿತವಾಗಿರಿಸುತ್ತದೆ.
ಸಬ್ಬಸಿಗೆ ಸೊಪ್ಪು ಗಾಯಗಳನ್ನು ವಾಸಿ ಮಾಡುತ್ತದೆ. ಗಾಯಗಳಾದಾಗ ಸಬ್ಬಸಿಗೆ ಸೊಪ್ಪಿನ ರಸ ತೆಗೆದು ಹಚ್ಚುವುದರಿಂದ, ಗಾಯದಿಂದ ಬರುವ ರಕ್ತ ನಿಲ್ಲುತ್ತದೆ ಹಾಗು ಗಾಯವು ಬೇಗನೆ ವಾಸಿಯಾಗುತ್ತದೆ.

ಸಬ್ಬಸಿಗೆ ಸೊಪ್ಪು ಬಿಕ್ಕಳಿಕೆಯನ್ನು ತಡೆಯುತ್ತದೆ. ಕೆಲವರಿಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿರುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು, ನಮ್ಮ ದಿನ ನಿತ್ಯದ ಆಹಾರದಲ್ಲಿ ಸಬ್ಬಸಿಗೆ ಸೊಪ್ಪಿನ ಬಳಕೆಯನ್ನು ಹೆಚ್ಚಿಸಿದ್ದಲ್ಲಿ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.
ಫ್ಯಾಟಿಲಿವರ್ ನ(Fatty liver) ಸಮಸ್ಯೆಗೆ ಸಬ್ಬಸಿಗೆ ಸೊಪ್ಪು ಸಹಕಾರಿಯಾಗಿದೆ. ಸಬ್ಬಸಿಗೆ ಸೊಪ್ಪಿಗೆ ಒಂದು ಚಮಚ ಎಳ್ಳು ಮತ್ತು ಒಂದು ಚಮಚ ಅಗಸೆ ಬೀಜದ ಸೇರಿಸಿ, ಜ್ಯೂಸು ಮಾಡಿಕೊಂಡು ಕುಡಿಯುವುದರಿಂದ ಪಿತ್ತ ಕೋಶದ ಸಮಸ್ಯೆಯು ಕಡಿಮೆಯಾಗುತ್ತದೆ.

ಸಬ್ಬಸಿಗೆ ಸೊಪ್ಪು ಬಾಣಂತಿಯರಲ್ಲಿ ಎದೆಹಾಲಿನ ಪ್ರಮಾಣವನ್ನು ಹೆಚ್ಚಿಸಲು ಸಹಕಾರಿ. ಹೆರಿಗೆಯ ನಂತರ ಕೆಲವು ಮಹಿಳೆಯರಿಗೆ ಎದೆಹಾಲಿನ ಪ್ರಮಾಣ ಕಡಿಮೆ ಇರುತ್ತದೆ. ಅಂತವರಿಗೆ ಸಬ್ಬಸಿಗೆ ಸೊಪ್ಪನ್ನು ನೀಡುವುದರಿಂದ ಅದರಲ್ಲಿರುವ ಕಬ್ಬಿಣ ಅಂಶವು ಎದೆಹಾಲನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ, ಹಾಗು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಋತುಚಕ್ರವನ್ನು ಸರಿಪಡಿಸುವಲ್ಲಿ ಸಬ್ಬಸಿಗೆ ಸೊಪ್ಪು ಸಹಕಾರಿಯಾಗಿದೆ. 
ಸಬ್ಬಸಿಗೆ ಸೊಪ್ಪು ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ. ಸಬ್ಬಸಿಗೆ ಸೊಪ್ಪನ್ನು ನಾವು ನಮ್ಮ ಆಹಾರ ಪದಾರ್ಥದಲ್ಲಿ ಅಳವಡಿಸಿಕೊಳ್ಳುವುದರಿಂದ ಅದರಲ್ಲಿರುವಂತಹ ಕ್ಯಾಲ್ಸಿಯಂ ಅಂಶವು ಮೂಳೆಗಳನ್ನು ಬಲಪಡಿಸುವ ಕಾರ್ಯ ನಿರ್ವಹಿಸುತ್ತದೆ.

ಮಾನಸಿಕ ಒತ್ತಡಗಳ ನಿಯಂತ್ರಣಕ್ಕೆ ಸಬ್ಬಸಿಗೆ ಸೊಪ್ಪು. ಸಬ್ಬಸಿಗೆ ಸೊಪ್ಪಿನಲ್ಲಿ, ವಿಟಮಿನ್ ಬಿ ಕಾಂಪ್ಲೆಕ್ಸ್ ಪೋಷಕಾಂಶಗಳು ಇದ್ದು, ಇದು ದೇಹದಲ್ಲಿ ಎಂಜೈಮ್ ಗಳು ಹಾಗು ಹಾರ್ಮೋನು ಗಳ ಉತ್ಪತ್ತಿಯನ್ನು ಮಾಡುತ್ತದೆ. ಇದರಿಂದ ಮನಸಿಗ್ಗೆ ಹೊಸ ಚೈತನ್ಯ ಬರುತ್ತದೆ ಹಾಗು ಒತ್ತಡ ದೂರವಾಗುತ್ತದೆ.
ಹೊಟ್ಟೆ ನೋವು ನಿವಾರಣೆಗೆ ಸಬ್ಬಸಿಗೆ ಸೊಪ್ಪು. ಸಬ್ಬಸಿಗೆ ಸೊಪ್ಪಿನ ರಸವನ್ನು ತೆಗೆದುಕೊಂಡು, ಅದಕ್ಕೆ ಜೇನು ತುಪ್ಪ ಬೆರೆಸಿ, ಸೇವಿಸುವುದರಿಂದ ಅಜೀರ್ಣದಿಂದುಂಟಾದ ಹೊಟ್ಟೆನೋವು ನಿವಾರಣೆಯಾಗುತ್ತದೆ.
ಸಬ್ಬಸಿಗೆ ಸೊಪ್ಪು ಅಲರ್ಜಿಯನ್ನು ಕಡಿಮೆ ಮಾಡುತ್ತದೆ. ಸಬ್ಬಸಿಗೆ ಸೊಪ್ಪನ್ನು ಅರಿಶಿನದ ಜೊತೆ ಅರೆದು, ಅಲರ್ಜಿಗಳಾದ ಚರ್ಮದ ಭಾಗಕ್ಕೆ ಹಚ್ಚುವುದರಿಂದ ಅಲರ್ಜಿಯು ಕಡಿಮೆಯಾಗುತ್ತದೆ.

ಸಬ್ಬಸಿಗೆ ಸೊಪ್ಪಿನ ಆರೋಗ್ಯಕಾರಿ ಗುಣಗಳು
ಮಲಬದ್ಧತೆಯ ನಿವಾರಣೆ ಮಾಡುತ್ತದೆ.
ವಾಯು (ಗ್ಯಾಸ್ಟ್ರಿಕ್) ತೊಂದರೆ ನಿವಾರಣೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕೀಲು ನೋವಿನ ಸಮಸ್ಯೆಯನ್ನು ನಿಯಂತ್ರಿಸುತ್ತದೆ.
ಶ್ವಾಶಕೋಶಕ್ಕೆ ಸಂಬಂದಿಸಿದ ತೊಂದರೆಗಳನ್ನು ಹತೋಟಿಗೆ ತರುತ್ತದೆ.
ಉರಿಯೂತವನ್ನು ಕಡಿಮೆ ಮಾಡುತ್ತದೆ.
ಹಾರ್ಮೋನ್ ಗಳ ಅಸಮತೋಲನವನ್ನು ಸರಿಪಡಿಸುತ್ತದೆ.

ಬಳಸುವ ವಿಧಾನ:  ಸಬ್ಬಸಿಗೆ ಸೊಪ್ಪಿನ ಪಲ್ಯ ಹಾಗೂ ಇತರ ವ್ಯಂಜನಗಳನ್ನು ಮಾಡಿ ತಿನ್ನುತ್ತಾರೆ. ಅದರಿಂದ ಅದರಲ್ಲಿರುವ ಅನೇಕ ಪೋಷಕಾಂಶಗಳು ನಷ್ಟವಾಗುತ್ತವೆ. ಸಬ್ಬಸಿಗೆ ಸೊಪ್ಪಿನ ಗರಿಷ್ಠ ಲಾಭಗಳನ್ನು ಪಡೆಯಲು ಈ ಕೆಳಗಿನಂತೆ ಉಪಯೋಗಿಸಬೇಕು. ಸಬ್ಬಸಿಗೆ ಸೊಪ್ಪಿನ 2 ಮುಷ್ಟಿ ಎಲೆಗಳನ್ನು ಅಡುಗೆ ಸೋಡಾ ಬೆರೆಸಿದ ನೀರಿನಲ್ಲಿ 20-30 ನಿಮಿಷಗಳವರೆಗೆ ನೆನೆಸಿ ಇಟ್ಟು ನಂತರ 2-3 ಬಾರಿ ಚೆನ್ನಾಗಿ ತೊಳೆದು ಹಸಿ ಎಲೆಗಳನ್ನು ಅಗಿದು ತಿನ್ನಬೇಕು ಅಥವಾ ಮಿಕ್ಸಿಯಲ್ಲಿ ನಿಧಾನವಾಗಿ ಬಿಸಿಯಾಗದಂತೆ ತಿರುಗಿಸಿ ಇದರ ಸ್ಮೂದಿ ಮಾಡಿ ಸೋಸಿಕೊಳ್ಳದೆ ಇಡಿಯಾಗಿ ಕುಡಿಯಬೇಕು. 

ಆಯುರ್ವೇದ ಗ್ರಂಥ ಮಾಲಿಕೆಯಿಂದ ಸಂಗ್ರಹ
ಕೆ, ಶಾಂತರಾಜ್, ಮೇದಾರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

11 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

12 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

21 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

21 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

1 day ago