ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ | ರಾಜ್ಯದ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳದ ಗುರಿ |

April 14, 2022
11:11 AM

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ  ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror