ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…