ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…