ಸುಮ್ಮನಿರಲಾರದೆ ಮೈಮೇಲೆ ಇರುವೆ ಬಿಟ್ಟುಕೊಂಡ್ರಂತೆ.. ಈ ಪರಿಸ್ಥಿತಿ ಬಂದಿದ್ದು ಮಾಲ್ಡಿವ್ಸ್ಗೆ(Maldives). ಪ್ರಧಾನಿ ನರೇಂದ್ರ ಮೋದಿ( PM Narendra Modi)ಹೋಗಿ ಬಂದಿದ್ದೇ ಈ ಮಾಲ್ಡೀವ್ಸ್ಗೆ ದೊಡ್ಡ ಹೊಡೆತ ನೀಡಿದೆ. ಪ್ರವಾಸೋದ್ಯಮವನ್ನೇ(Tourism) ನಂಬಿ ಬದುಕುತ್ತಿರುವ ಈ ಪುಟ್ಟ ದೇಶ ಈಗ ಪರದಾಡುವಂತಾಗಿದೆ. ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್ಗೆ ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.
ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.
ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.
As a response to Maldives leaning towards China, the central government has announced development of Lakshadweep in its budget. In her budget speech, Finance Minister Niramala Sitharaman said that port connectivity and infrastructure projects will be started in many islands including Lakshadweep to boost domestic tourism.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…