MIRROR FOCUS

ಮತ್ತೆ ಚರ್ಚೆಯಾಗುತ್ತಿದೆ ಕುಕ್ಕೆ ಸುಬ್ರಹ್ಮಣ್ಯದ ಪೂಜೆ…! | ಕುಕ್ಕೆಯ ಎಲ್ಲಿ ಬೇಕಾದರೂ, ಯಾರು ಬೇಕಾದರೂ ಪೂಜೆ, ಸೇವೆ ನಡೆಸಬಹುದು…! | ಏಕೆ ಸರ್ಕಾರ, ಆಡಳಿತ ಮೌನವಾಗಿದೆ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆ ಮತ್ತೆ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಿಂದ ಈ ಬಗ್ಗೆ ಚರ್ಚೆ, ಗದ್ದಲ ನಡೆದರೂ ಸರ್ಕಾರ, ಆಡಳಿತವು ಮೌನವನ್ನೇ ವಹಿಸಿದೆ. ಭಕ್ತಾದಿಗಳಲ್ಲಿ ಗೊಂದಲ ಮೂಡಿಸುವ ಇಂತಹ ಚರ್ಚೆಗಳಿಗೆ ಯಾವಾಗ ಬ್ರೇಕ್‌ ಬೀಳುತ್ತೆ ಎನ್ನುವುದೇ ಪ್ರಶ್ನೆಯಾಗಿದೆ.

ರಾಜ್ಯದ ಪ್ರತಿಷ್ಟಿತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ನಾಗ ದೋಷ ನಿವಾರಣೆಯ ಕ್ಷೇತ್ರವಾಗಿ ಕುಕ್ಕೆ ಸುಬ್ರಹ್ಮಣ್ಯ ಹೆಸರುವಾಸಿಯಾಗಿದೆ. ಅನೇಕರು ಕುಕ್ಕೆಯಲ್ಲಿ ಪೂಜೆ ಸಲ್ಲಿಸಿ ದೋಷ ನಿವಾರಣೆಗಾಗಿ ಪ್ರಾರ್ಥಿಸಿಕೊಂಡು ತೆರಳುತ್ತಾರೆ. ನಾಗ ದೋಷ ಎಂದಾಕ್ಷಣ, ಸರ್ಪಸಂಸ್ಕಾರ, ನಾಗಪ್ರತಿಷ್ಟೆಯನ್ನು ಮಾಡುವಂತೆ ಸಾಮಾನ್ಯವಾಗಿ ಜ್ಯೋತಿಷಿಗಳು ಹೇಳುತ್ತಾರೆ. ಈ ಪ್ರಕಾರ ಭಕ್ತರು ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿಯೇ ಪೂಜೆ ಮಾಡಿಸಲು ಬರುತ್ತಾರೆ.

ಆದರೆ ಕುಕ್ಕೆ ಕ್ಷೇತ್ರದಲ್ಲಿ ಪೂಜೆ ಮಾಡಿಸಬೇಕೋ ಅಥವಾ ಕುಕ್ಕೆಯ ಎಲ್ಲಾದರೂ ಪೂಜೆ ಮಾಡಿಸಬೇಕೋ ಎಂಬುದರ ಬಗ್ಗೆ ಜ್ಯೋತಿಷಿಗಳೂ ಹೇಳುವುದಿಲ್ಲ, ಭಕ್ತರಿಗೂ ಮಾಹಿತಿ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಕ್ತರಿಗೆ ಈ ಬಗ್ಗೆ ಮಾಹಿತಿ ಇದೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿಯೇ ಪೂಜೆ ಮಾಡಿಸಬೇಕು ಎಂಬ ಕಾರಣದಿಂದ ಕ್ಷೇತ್ರದಲ್ಲಿಯೇ ಪೂಜೆ ಮಾಡಿಸುತ್ತಾರೆ. ಆದರೆ ಈ ಬಗ್ಗೆ ಮಾಹಿತಿ ಇಲ್ಲದ ಅನೇಕರು ಸುಬ್ರಹ್ಮಣ್ಯದ ಎಲ್ಲಾದರೂ ಪೂಜೆ ಮಾಡಿಸಿ ತೆರಳುತ್ತಾರೆ, ನಂತರ ಪುನ: ಬಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಯೇ ಪೂಜೆ ಮಾಡಿಸಿದ ಉದಾಹರಣೆಯೂ ಇದೆ.

ಇದೀಗ ಚರ್ಚೆಯ ವಿಷಯ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುವ ವಿಷಯ ಕುಕ್ಕೆ ಸುಬ್ರಹ್ಮಣ್ಯದ ಬಳಿಯಲ್ಲಿಯೇ  ಇರುವ ಮಠದ ಸರ್ಪಸಂಸ್ಕಾರ, ಆಶ್ಲೇಷ ಬಲಿಯ ಬಗ್ಗೆ. ಈ ಬಗ್ಗೆ ರಶೀದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಭಕ್ತಾದಿಗಳಿಗೆ ಎಲ್ಲಿ ಬೇಕೋ ಅಲ್ಲಿ ಸೇವೆ ಮಾಡಿಸಲು , ಪೂಜೆ ಮಾಡಿಸಲು ಅವಕಾಶ ಇದೆ. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸುಬ್ರಹ್ಮಣ್ಯೇಶ್ವರ ದೇವರಿಗೆ ಪೂಜೆ ನಡೆದರೆ, ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ನರಸಿಂಹ ದೇವರಿಗೆ ಆರಾಧನೆ ನಡೆಯುತ್ತದೆ. ಹೀಗಿರುವಾಗ ಕುಕ್ಕೆ ಸುಬ್ರಹ್ಮಣ್ಯದ ಎಲ್ಲಿ ಬೇಕಾದರೂ ಯಾವ ಸೇವೆ, ಯಾರು ಬೇಕಾದರೂ ನಡೆಯಬಹುದು, ಭಕ್ತರು ಪೂಜೆ ನಡೆಸಬಹುದಾದರೆ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಏಕೆ ಎಂಬುದು ಚರ್ಚೆಯ ಸಾರಾಂಶವಾಗಿದೆ.

Advertisement

ಈ ಬಗ್ಗೆ ದೇವಸ್ಥಾನದ ಆಡಳಿತ ಮೌನ ವಹಿಸಿದೆ, ಸರ್ಕಾರ ಮೌನ ವಹಿಸಿದೆ. ಹಿಂದೂ ಹಿತರಕ್ಷಣೆ ಎನ್ನುವ ವ್ಯಕ್ತಿಗಳೂ ಮೌನವಾಗಿದ್ದಾರೆ. ಹಾಗಿದ್ದರೆ ಕುಕ್ಕೆಯ ಇತರ ಕಡೆಗಳಲ್ಲೂ ಏಕೆ ಇಂತಹ ಸೇವೆಗಳು ಸಾರ್ವಜನಿಕವಾಗಿ ನಡೆಯಬಾರದು ಎಂಬುದು ಗಂಭೀರವಾದ ಪ್ರಶ್ನೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…

19 hours ago

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ

ಗ್ರೇಟರ್ ಬೆಂಗಳೂರು  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…

19 hours ago

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…

19 hours ago

ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…

1 day ago

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ…

1 day ago

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ

ಬಾಂಗ್ಲಾದೇಶದಲ್ಲಿ  ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ  ರೋಗಿಗಳ…

1 day ago