Advertisement
MIRROR FOCUS

ಮತ್ತೆ ಚರ್ಚೆಯಾಗುತ್ತಿದೆ ಕುಕ್ಕೆ ಸುಬ್ರಹ್ಮಣ್ಯದ ಪೂಜೆ…! | ಕುಕ್ಕೆಯ ಎಲ್ಲಿ ಬೇಕಾದರೂ, ಯಾರು ಬೇಕಾದರೂ ಪೂಜೆ, ಸೇವೆ ನಡೆಸಬಹುದು…! | ಏಕೆ ಸರ್ಕಾರ, ಆಡಳಿತ ಮೌನವಾಗಿದೆ…?

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆ ಮತ್ತೆ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಿಂದ ಈ ಬಗ್ಗೆ ಚರ್ಚೆ, ಗದ್ದಲ ನಡೆದರೂ ಸರ್ಕಾರ, ಆಡಳಿತವು ಮೌನವನ್ನೇ ವಹಿಸಿದೆ. ಭಕ್ತಾದಿಗಳಲ್ಲಿ ಗೊಂದಲ ಮೂಡಿಸುವ ಇಂತಹ ಚರ್ಚೆಗಳಿಗೆ ಯಾವಾಗ ಬ್ರೇಕ್‌ ಬೀಳುತ್ತೆ ಎನ್ನುವುದೇ ಪ್ರಶ್ನೆಯಾಗಿದೆ.

ರಾಜ್ಯದ ಪ್ರತಿಷ್ಟಿತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ನಾಗ ದೋಷ ನಿವಾರಣೆಯ ಕ್ಷೇತ್ರವಾಗಿ ಕುಕ್ಕೆ ಸುಬ್ರಹ್ಮಣ್ಯ ಹೆಸರುವಾಸಿಯಾಗಿದೆ. ಅನೇಕರು ಕುಕ್ಕೆಯಲ್ಲಿ ಪೂಜೆ ಸಲ್ಲಿಸಿ ದೋಷ ನಿವಾರಣೆಗಾಗಿ ಪ್ರಾರ್ಥಿಸಿಕೊಂಡು ತೆರಳುತ್ತಾರೆ. ನಾಗ ದೋಷ ಎಂದಾಕ್ಷಣ, ಸರ್ಪಸಂಸ್ಕಾರ, ನಾಗಪ್ರತಿಷ್ಟೆಯನ್ನು ಮಾಡುವಂತೆ ಸಾಮಾನ್ಯವಾಗಿ ಜ್ಯೋತಿಷಿಗಳು ಹೇಳುತ್ತಾರೆ. ಈ ಪ್ರಕಾರ ಭಕ್ತರು ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿಯೇ ಪೂಜೆ ಮಾಡಿಸಲು ಬರುತ್ತಾರೆ.

ಆದರೆ ಕುಕ್ಕೆ ಕ್ಷೇತ್ರದಲ್ಲಿ ಪೂಜೆ ಮಾಡಿಸಬೇಕೋ ಅಥವಾ ಕುಕ್ಕೆಯ ಎಲ್ಲಾದರೂ ಪೂಜೆ ಮಾಡಿಸಬೇಕೋ ಎಂಬುದರ ಬಗ್ಗೆ ಜ್ಯೋತಿಷಿಗಳೂ ಹೇಳುವುದಿಲ್ಲ, ಭಕ್ತರಿಗೂ ಮಾಹಿತಿ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಕ್ತರಿಗೆ ಈ ಬಗ್ಗೆ ಮಾಹಿತಿ ಇದೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿಯೇ ಪೂಜೆ ಮಾಡಿಸಬೇಕು ಎಂಬ ಕಾರಣದಿಂದ ಕ್ಷೇತ್ರದಲ್ಲಿಯೇ ಪೂಜೆ ಮಾಡಿಸುತ್ತಾರೆ. ಆದರೆ ಈ ಬಗ್ಗೆ ಮಾಹಿತಿ ಇಲ್ಲದ ಅನೇಕರು ಸುಬ್ರಹ್ಮಣ್ಯದ ಎಲ್ಲಾದರೂ ಪೂಜೆ ಮಾಡಿಸಿ ತೆರಳುತ್ತಾರೆ, ನಂತರ ಪುನ: ಬಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಯೇ ಪೂಜೆ ಮಾಡಿಸಿದ ಉದಾಹರಣೆಯೂ ಇದೆ.

ಇದೀಗ ಚರ್ಚೆಯ ವಿಷಯ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುವ ವಿಷಯ ಕುಕ್ಕೆ ಸುಬ್ರಹ್ಮಣ್ಯದ ಬಳಿಯಲ್ಲಿಯೇ  ಇರುವ ಮಠದ ಸರ್ಪಸಂಸ್ಕಾರ, ಆಶ್ಲೇಷ ಬಲಿಯ ಬಗ್ಗೆ. ಈ ಬಗ್ಗೆ ರಶೀದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಭಕ್ತಾದಿಗಳಿಗೆ ಎಲ್ಲಿ ಬೇಕೋ ಅಲ್ಲಿ ಸೇವೆ ಮಾಡಿಸಲು , ಪೂಜೆ ಮಾಡಿಸಲು ಅವಕಾಶ ಇದೆ. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸುಬ್ರಹ್ಮಣ್ಯೇಶ್ವರ ದೇವರಿಗೆ ಪೂಜೆ ನಡೆದರೆ, ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ನರಸಿಂಹ ದೇವರಿಗೆ ಆರಾಧನೆ ನಡೆಯುತ್ತದೆ. ಹೀಗಿರುವಾಗ ಕುಕ್ಕೆ ಸುಬ್ರಹ್ಮಣ್ಯದ ಎಲ್ಲಿ ಬೇಕಾದರೂ ಯಾವ ಸೇವೆ, ಯಾರು ಬೇಕಾದರೂ ನಡೆಯಬಹುದು, ಭಕ್ತರು ಪೂಜೆ ನಡೆಸಬಹುದಾದರೆ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಏಕೆ ಎಂಬುದು ಚರ್ಚೆಯ ಸಾರಾಂಶವಾಗಿದೆ.

ಈ ಬಗ್ಗೆ ದೇವಸ್ಥಾನದ ಆಡಳಿತ ಮೌನ ವಹಿಸಿದೆ, ಸರ್ಕಾರ ಮೌನ ವಹಿಸಿದೆ. ಹಿಂದೂ ಹಿತರಕ್ಷಣೆ ಎನ್ನುವ ವ್ಯಕ್ತಿಗಳೂ ಮೌನವಾಗಿದ್ದಾರೆ. ಹಾಗಿದ್ದರೆ ಕುಕ್ಕೆಯ ಇತರ ಕಡೆಗಳಲ್ಲೂ ಏಕೆ ಇಂತಹ ಸೇವೆಗಳು ಸಾರ್ವಜನಿಕವಾಗಿ ನಡೆಯಬಾರದು ಎಂಬುದು ಗಂಭೀರವಾದ ಪ್ರಶ್ನೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago