ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…