ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…