ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…