ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…