ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…