ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ

April 22, 2025
6:22 AM

ರಾಜ್ಯದಲ್ಲಿ ಕಳೆದ ವರ್ಷ 25 ಸಾವಿರಕ್ಕೂ ಅಧಿಕ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ. ಬೃಹತ್ ಮತ್ತು ಸಣ್ಣ ನೀರಾವರಿಗೆ 25 ಸಾವಿರ ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗುತ್ತಿದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕೃಷಿಭಾಗ್ಯವನ್ನು ಮಳೆ ಆಧಾರಿತ ಕೃಷಿ ಬೆಳೆಗಾರರಿಗೂ ಜಾರಿಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ಸಹಾಯಧನದ ಅಡಿಯಲ್ಲಿ ರೈತರಿಗೆ ವಿವಿಧ ಯಂತ್ರೋಪಕರಣಗಳು ಮತ್ತು ಸವಲತ್ತುಗಳನ್ನು  ವಿತರಿಸಿದರು.ರಾಜ್ಯ ಸರ್ಕಾರ ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ವಿವಿಧ ಯಂತ್ರೋಪಕರಣಗಳು ಹಾಗೂ ಸಲಕರಣೆಗಳನ್ನು ವಿತರಣೆ ಮಾಡಲಾಗಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಚಿವ ಚಲುವರಾಯಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಈ ವರ್ಷ 12 ಸಾವಿರಕ್ಕೂ ಅಧಿಕ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೃಷಿಯಲ್ಲಿ ವಿಭಿನ್ನ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ.  ರೈತರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್ ಸೇರಿದಂತೆ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror