MIRROR FOCUS

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

Advertisement

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

3 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

8 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

16 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

17 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

1 day ago