Advertisement
MIRROR FOCUS

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

Share

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

4 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

4 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

12 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

14 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

20 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

20 hours ago