Advertisement
MIRROR FOCUS

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

Share

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

21 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

22 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago