Advertisement
MIRROR FOCUS

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

Share

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago