Advertisement
ಸುದ್ದಿಗಳು

ಸಂಪಾಜೆಯಲ್ಲಿ ಕೃಷಿ ಸಖಿಯರ ಮೂಲಕ ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ

Share

ಸಂಪಾಜೆ  ಗ್ರಾಮ ಪಂಚಾಯತ್‌ ವಿಶೇಷ ಗ್ರಾಮಸಭೆ ಹಾಗೂ ಕೃಷಿ ಸಖಿಯರ ಮೂಲಕ ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ ಕಾರ್ಯಕ್ರಮ ನಡೆಯಿತು.

ದ.ಕ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಏಣಿಗಳ ವಿತರಣೆ ಹಾಗೂ ಉಚಿತ ಜೈವಿಕ ಗೊಬ್ಬರ ವಿತರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದರು.  ಗ್ರಾಮ ಪಂಚಾಯತ್ ಸಂಪಾಜೆ ಕಲ್ಲುಗುಂಡಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) – ಕೇಂದ್ರ ವಿಟ್ಲ, ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಫುಡ್ ಚೈನ್ ಕ್ಯಾಂಪೇನ್, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇವರುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹನೀಫ್ ಎಸ್.ಕೆ, ಸದಸ್ಯರು ಜಿ.ಕೆ ಹಮೀದ್, ಪಿಡಿಓ ಸರಿತಾ ಓಲ್ಗಾ ಡಿಸೋಜಾ, ನರೇಗಾ ಎಂಜಿನಿಯರ್ ಪ್ರಮೀಳಾ, ಸುಧನ ಕೃಷ್ಣ, ಸೆಕ್ರಟರಿ ತಿರುಮಲೇಶ್ವರ ಉಪಸ್ಥಿತರಿದ್ದರು.

ನರೇಗಾ ಯೋಜನೆ ಕುರಿತು ಮಾಹಿತಿ, ಚರ್ಚೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ರಸ್ತೆ–ಚರಂಡಿ ನಿರ್ಮಾಣ, ಬಾವಿ ಪುನಶ್ಚೇತನ, ಹೂಳೆತ್ತುವಿಕೆ, ರಬ್ಬರ್ ಗಿಡ ನೆಡುವ ಕಾರ್ಯಗಳಿಗೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲು ಮನವಿ ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅರ್ಕಾ ಜೈವಿಕ ಗೊಬ್ಬರ – ಎ.ಎಂ.ಸಿ ಮಾಹಿತಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಸರ್ಕಾರದ ಕೃಷಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು ಸುಳ್ಯದ ಕೃಷಿ ಸಖಿಯರಿಗೆ ತರಬೇತಿ ನೀಡಿದ್ದು, ಪ್ರತಿಷ್ಠಿತ ಸಂಸ್ಥೆಯ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿಪಡಿಸಿದ ವಿಶೇಷ ಸೂಕ್ಷ್ಮಾಣು ಜೀವಿಗಳ ಜೈವಿಕ ಗೊಬ್ಬರ ಅರ್ಕಾ ಎಎಂಸಿ ಬಗ್ಗೆ, ರೈತ ಉತ್ಪಾದಕರ ಸಂಸ್ಥೆ, ಇ-ಕೆ ವೈ ಸಿ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸುಂದರಿ ಮುಂಡಡ್ಕ, ಸಂಜೀವಿನಿ ಎಂ.ಬಿ.ಕೆ ಕಾಂತಿ ಬಿ.ಎಸ್, ಎಲ್‌ಸಿಆರ್‌ಪಿ ಸೌಮ್ಯ, ಭಾರತಿ, ಪಂಚಾಯತ್ ಸಿಬ್ಬಂದಿಗಳಾದ ಗೋಪಮ್ಮ, ಸವಿತಾ, ಮಧುರಾ, ಉಮೇಶ್, ಬೋಜ, ಕೃಷಿಕರು ಹಾಗೂ ಫಲಾನುಭವಿಗಳು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

10 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

11 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago