ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ

November 16, 2025
10:16 AM

ಎನ್‌ಆರ್‌ಎಲ್‌ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರದ ಕೃಷಿ ಸಖಿ ಮುಖಾಂತರ ರಿಯಾಯಿತಿ ದರದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ವತಿಯಿಂದ ರೈತರ ಬೇಡಿಕೆಯ ಮೇರೆಗೆ ಏಣಿಗಳ ವಿತರಣೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಜ್ಜಾವರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಅಬ್ದುಲ್ಲಾ ಎ, ಪಿಡಿಓ ಜಯಮಾಲ, ಪಂಚಾಯತ್ ಸಿಬ್ಬಂದಿಗಳಾದ ಕಾರ್ತಿಕ್, ಲೋಕೇಶ್, ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಜಯಶ್ರೀ, ಎಲ್ ಸಿ ಆರ್ ಪಿ ವಾಣಿ, ಹರಿಣಾಕ್ಷಿ, ಪಶುಸಖಿ ಪುಷ್ಪಲತಾ, ಕೃಷಿ ಸಖಿ ಪೂರ್ಣಿಮಾ ಬಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಸಿಬ್ಬಂದಿಯವರು ಹಾಗೂ 16 ಮಂದಿ ಫಲಾನುಭವಿ ರೈತರು ಹಾಜರಿದ್ದರು.

ರೈತರಿಗೆ ಕೃಷಿ ಕ್ಷೇತ್ರದಲ್ಲಿ ಅವರ ಬೇಡಿಕೆಯಂತೆ ಅಗತ್ಯವಾಗಿರುವ ಸಾಧನಗಳನ್ನು ಒದಗಿಸುವ ಮೂಲಕ ಅವರ ಕಾರ್ಯಕ್ಷಮತೆಯನ್ನು ವೃದ್ಧಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror