ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

June 12, 2024
1:36 PM

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

Advertisement
Advertisement

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

Advertisement

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

Advertisement

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಜನರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು | ಕೇರಳ ಹೈಕೋರ್ಟ್‌ ಅಭಿಪ್ರಾಯ |
July 2, 2024
11:18 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಉತ್ತಮ ಮಳೆ ಹಾಗೂ ಗಾಳಿಯ ನಿರೀಕ್ಷೆ |
July 2, 2024
9:30 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ತಾಳಮದ್ದಳೆ ಸಪ್ತಾಹ ಉದ್ಘಾಟನೆ | ಜು.7 ಸಮಾರೋಪ |
July 2, 2024
9:02 PM
by: ದ ರೂರಲ್ ಮಿರರ್.ಕಾಂ
ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ
July 2, 2024
8:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror