ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

June 12, 2024
1:36 PM

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror