MIRROR FOCUS

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

Advertisement
Advertisement

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

4 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

5 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

10 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

12 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

13 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

13 hours ago