Advertisement
MIRROR FOCUS

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

Share

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

Advertisement
Advertisement

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

12 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago