Advertisement
MIRROR FOCUS

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

Share

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago