Advertisement
MIRROR FOCUS

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |

Share

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ…! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು ಮೇಡು ಎಲ್ಲ ಕಡೆ ಗಿಡ ನೆಡುವ ಕಾರ್ಯಕ್ರಮ…!. 

ಆದರೆ ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳಲ್ಲಿ ಗಿಡದ ಬಗ್ಗೆ ಕಾಳಜಿ ಬೆಳೆಸಿದರೆ ಅದು ಇನ್ನಷ್ಟು ವ್ಯಾಪಿಸುತ್ತದೆ, ಅದಕ್ಕೊಂದು ಅರ್ಥವೂ ಬರುತ್ತದೆ. ಇದೀಗ ವಿಶೇಷವಾಗಿ ದೇಗುಲಕ್ಕೆ(Temple) ಬಂದತಂಹ ಭಕ್ತಾಧಿಕಗಳಿಗೆ ಗಿಡಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಿ ಪರಿಸರದ ಮೇಲೆ ವಿಶೇಷ ಕಾಳಜಿ ಮೆರೆದಿದ್ದಾರೆ ದೇವಸ್ಥಾನದ ಆಡಳಿತ ಮಂಡಳಿ. ಅಂಕೋಲಾದ ಬಿಳಿಹೋಯ್ಗೆ ಗ್ರಾಮದ ಜೈನ ಜಟಗ ಮಹಾದೇವಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಈ ರೀತಿಯಾಗಿ ವಿಶಿಷ್ಟ ಕಾರ್ಯಕ್ರಮವನ್ನು ವಿಶೇಷ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು.

ಜೈನ ಜಟಗ ಹಾಗೂ ಪರಿವಾರದ ದೇಗುಲ ತುಂಬಾ ಪುರಾತನವಾದದ್ದು. ಅದರ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆಯ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ದೇವರ ಪ್ರಸಾದವಾಗಿ ಬಂದಂತಹ ಭಕ್ತಾದಿಗಳಿಗೆ ಗಿಡಗಳನ್ನು ನೀಡಲಾಯಿತು. ಜೊತೆಗೆ ನವಚಂಡಿಕಾ ಹವನದ ಸುತ್ತ ಗಿಡಗಳನ್ನು ಇಟ್ಟು ಅಭಿಮಾನಿ ದೇವತೆಗಳನ್ನು ಆವಾಹಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದದ ಜೊತೆ ಗಿಡ ವಿತರಿಸಲಾಯಿತು.

ಯಾವೆಲ್ಲ ಗಿಡಗಳು? : ಸಂಪಿಗೆ, ನೆಲ್ಲಿ, ಮುರುಗಲು, ಹುಣಸೆ, ಮಾವು, ಹಲಸು, ಗೇರು, ನೇರಳೆ ಗಿಡಗಳನ್ನು ಭಕ್ತರಿಗೆ ವಿತರಿಸಲಾಯಿತು. ಅರಣ್ಯ ಇಲಾಖೆಯ ಸಹಾಯದಿಂದ ವಿವಿಧ ತಳಿಯ ಗಿಡಗಳು ಹೀಗೆ ಭಕ್ತರಿಗೆ ಹಸ್ತಾಂತರಿಸಲಾಯಿತು. ದೇಗುಲದ ಪರಿಸರ ಕಾಳಜಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಯಿತು. ಇದೇ ರೀತಿ ಉಳಿದ ದೇವಸ್ಥಾನಗಳಲ್ಲೂ ಈ ಕಾರ್ಯವನ್ನು ಮಾಡಿದಲ್ಲಿ ನಮ್ಮ ಪರಿಸರ ಉಳಿಸುವ ಕಾರ್ಯವನ್ನು ಮಾಡಬಹುದು. ಕೇವಲ ದೇವಸ್ಥಾನ ಮಾತ್ರವಲ್ಲದೆ ಇತರ ಕಾರ್ಯಕ್ರಮಗಳಾದ ಮದುವೆ, ಸಭೆ, ಗೃಹ ಪ್ರವೇಶ, ಹುಟ್ಟು ಹಬ್ಬಕ್ಕೆ ಈ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಗೆ ನಾವು ಅತ್ಯದ್ಭುತ ಬಹುಮಾನವನ್ನು ನೀಡಬಹುದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago