ಹಸಿರು ತುಂಬಿದ ಮನ

April 22, 2024
11:14 PM
ಶುಭ ಸಮಾರಂಭದಲ್ಲಿ ಐಸ್‌ಕ್ರೀಂ, ಹಣ್ಣುಗಳ ಜೊತೆ ಎಲ್ಲರಿಗೂ ಒಂದೊಂದು ಗಿಡ. ಇಂತಹದೊಂದು ವಿಶೇಷ ಕಾರ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ..
12-4-2024. ಮಂಗಳೂರು ಸನಿಹದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಿ.ಸುಧನ್ವನಿಗೆ ಉಪನಯನ. ಬಂಧುಗಳು, ಇಷ್ಟ-ಮಿತ್ರರ ಸಮಾಗಮ. ಲೋಕಾಭಿರಾಮ ಮಾತುಕತೆ. ಮೃಷ್ಟಾನ್ನ ಭೋಜನ. ಓಟಿನ ಸಮಯವಲ್ವಾ… ಒಂದಷ್ಟು ಓಟು-ಗೀಟು ಚರ್ಚೆ. ರಣ ಬಿಸಿಲು ಬೇರೆ. ಹೊಟ್ಟೆ ತಂಪು ಮಾಡಿಕೊಳ್ಳಲು ತಂಪಿನ ಪಾನೀಯಗಳು.ಇದರಲ್ಲೇನು ವಿಶೇಷ? ಊಟದ ಪಂಕ್ತಿಯ ಮಧ್ಯೆ ವಟುವಿನ ಹೆತ್ತವರಾದ ಶ್ರೀಮತಿ ಅಂಬಿಕಾ – ಗಿರೀಶ್ ಹೊಳ್ಳರು ಉಪಚಾರ ಮಾಡುತ್ತಾ, ಎಲ್ಲರನ್ನೂ ಪರಿಚಯಿಸುತ್ತಾ ಹೋದರು. ಸ್ವಲ್ಪ ಹೊತ್ತಲ್ಲಿ ಪುನಃ ಬಂದು ‘ತಾವು ತೆರಳುವಾಗ ಒಂದೊಂದು ಗಿಡವನ್ನೂ ಕೊಂಡೊಯ್ಯಬೇಕು’ ವಿನಂತಿಸಿದರು. 
ಊಟ ಮಾಡಿದ ಬಳಿಕ ಸಿಹಿ ಪೊಟ್ಟಣ, ಐಸ್‍ಕ್ರೀಮ್, ಐಸ್‍ಕ್ಯಾಂಡಿ.. ಇತ್ಯಾದಿಗಳೊಂದಿಗೆ ಕಲಾಪ ಪೂರ್ಣಗೊಳ್ಳುತ್ತದೆ. ಆದರೆ ಉಪನಯನಕ್ಕೆ ಆಗಮಿಸಿದವರೆಲ್ಲರ ಕೈಗೆ ಗಿರೀಶ್ ದಂಪತಿ ಹಣ್ಣಿನ ಕಸಿ ಗಿಡಗಳನ್ನು ನೀಡಿದ್ದರು. ಅಂದು ಮ್ಯಾಂಗೋಸ್ಟಿನ್, ವಿಯೆಟ್ನಾಂ ಹಲಸು, ಮೇಣ ರಹಿತ ಹಲಸು, ಜಂಬೂ ನೇರಳೆ, ಮೈಸೂರು ನೇರಳೆ, ಡ್ರ್ಯಾಗನ್ ಹಣ್ಣು, ಪವಾಡ ಹಣ್ಣು, ಲಕ್ಷ್ಮಣ ಫಲ.. ಹೀಗೆ ವೈವಿಧ್ಯ ಕಸಿಗಿಡಗಳನ್ನು  ಗಿರೀಶ್ ಆಯ್ಕೆ ಮಾಡಿದ್ದರು.
ಅನೇಕರು ‘ಜಾಗ ಇಲ್ಲ, ಎಲ್ಲಿ ನೆಡಲಿ’ ಎನ್ನುವ ಅಸಹಾಯಕತೆಯನ್ನು ತೋರಿದರೂ, ‘ಒಂದು ಗಿಡ ಇರಲಿ, ಇದ್ದ ಜಾಗದಲ್ಲಿ ನೆಡೋಣ’ ಎಂದು ತಮ್ಮನ್ನು ತಾವೇ ಸಮಾಧಾನ ಪಡಿಸಿಕೊಂಡು ಗಿಡವನ್ನು ಒಯ್ದಿದ್ದರು. ‘ಮ್ಯಾಂಗೋಸ್ಟೀನ್.. ಹಾಗೆಂದರೇನು’ ಎನ್ನುವ ಚೋದ್ಯವನ್ನು ‘ಗೂಗಲ್ ಮಾಮ’ ಉತ್ತರ ನೀಡುತ್ತಿದ್ದ! ‘ಎರಡು ವರುಷದಲ್ಲೇ ಹಣ್ಣು ಬಿಡುತ್ತಂತೆ’ ಎಂದು ಇನ್ನಷ್ಟು ಮಂದಿಯ ವಿಸ್ಮಯ.
ಎಲ್ಲರಿಗೂ ಒಂದೊಂದು ಗಿಡ. ಆದರೆ ಒಂದಿಬ್ಬರು ‘ನನಗೆರಡು ಬೇಕು, ಮೂರು ಇರಲಿ’ ಎಂದು ಅಲ್ಲಿನ ಸಹಾಯಕರನ್ನು ವಿನಂತಿ ಮಾಡುತ್ತಿದ್ದರು. ‘ನೀವು ಗಿಡ ಕೊಂಡೋಗುವುದು ಮಾತ್ರ. ನಾನೇ ನೆಟ್ಟು ಆರೈಕೆ ಮಾಡಬೇಕಷ್ಟೇ.” ಗಂಡನನ್ನು ಛೇಡಿಸುವ ಪತ್ನಿ… ಹೀಗೆ ಕಸಿ ಗಿಡಗಳ ಉಡುಗೊರೆಗಳ ಸುತ್ತ ಮಾತುಗಳ ಸರಮಾಲೆಗಳು.
ಗಿರೀಶ್ ದಂಪತಿಯ ಹಿರಿಯ ಪುತ್ರನ ಉಪನಯನದ ಸಂದರ್ಭದಲ್ಲೂ ಗಿಡಗಳನ್ನು ಉಡುಗೊರೆಯಾಗಿ ನೀಡಿದ್ದರು. “ಅಂದು ಒಯ್ದ ಹಲಸಿನ ಗಿಡದಲ್ಲಿ ಕಳೆದ ವರುಷವೇ ಕಾಯಿ ಬಂದಿದೆ.”, “ಮಾವು ಚೆನ್ನಾಗಿ ರುಚಿಯಾಗಿತ್ತು.” ಹೀಗೆ ಹಿಮ್ಮಾಹಿತಿ ನೀಡುವಾಗ ಗಿರೀಶ್ ಮುಖ ಅರಳಿತ್ತು. ಅಂದು ಸಿಹಿ ಪೊಟ್ಟಣವನ್ನು ನೀಡಲು ಸಹ ಸೆಣಬಿನ ಚೀಲ ವ್ಯವಸ್ಥೆ ಮಾಡಿದ್ದರು. ಊಟದ ಎರಡನೇ ಪಂಕ್ತಿ ಮುಗಿಯುವಾಗ ಗಿಡಗಳೆಲ್ಲಾ ಖಾಲಿ ಖಾಲಿ! ಯಾರೋ ಒಬ್ಬರು ತೆಗೆದಿರಿಸಿದ್ದ ಗಿಡವೂ ನಾಪತ್ತೆ!
ಉಪನಯನ ಮುಗಿಸಿ ಹೊರಡುವಾಗ ‘ಗಿರೀಶ ಹೊಳ್ಳ ದಂಪತಿಯ ಹಸಿರು ಕಾಳಜಿ’ ಮನತುಂಬಿತ್ತು. ಅವರೊಳಗಿನ ‘ಸಾರ್ಥಕ್ಯ ಭಾವ’ದ ಖುಷಿ ಆಗಾಗ್ಗೆ ಇಣುಕುತ್ತಿದ್ದುವು.
 ನಮ್ಮ ನಡುವೆ ಅದೆಷ್ಟೋ ಅದ್ದೂರಿ ಕಾರ್ಯಕ್ರಮಗಳು ನಡೆಯುತ್ತವೆ. ನಡೆಯಲಿ, ಅವೆಲ್ಲಾ ಅವರವರ ಸಾಮಥ್ರ್ಯಕ್ಕೆ ಅನುಸಾರವಾಗಿ ಏರ್ಪಡುತ್ತವೆ. ಇದರ ಮಧ್ಯೆ ಹಸಿರಿಗೂ ಜಾಗ ಇರಲಿ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ಪ್ರಮುಖ ಸುದ್ದಿ

MIRROR FOCUS

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ
ನೂರಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ
August 12, 2025
7:52 AM
by: The Rural Mirror ಸುದ್ದಿಜಾಲ
ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ : ರಾಘವೇಶ್ವರ ಶ್ರೀ
August 12, 2025
7:45 AM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ
August 12, 2025
7:34 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group