Advertisement
MIRROR FOCUS

ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಧಿಕಾರಿಯ ದಿಟ್ಟ ಕ್ರಮ | ಮೂರು ವರ್ಷದಲ್ಲಿ ಆರು ಮೀಟರ್ ಅಂತರ್ಜಲ ಹೆಚ್ಚಳ

Share

ತೆಲಂಗಾಣದ(Telangana) ರಾಜನ್ನ- ಸಿರಿಸಿಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ(DC) 2012 ನೇ ಸಾಲಿನ ಐಎಎಸ್ ಅಧಿಕಾರಿ(IAS officer) ಜಿಲ್ಲೆಯಾದ್ಯಂತ ಅಂತರ್ಜಲ(found water) ವೃದ್ಧಿಯಾಗಿ ಕೈಗೊಂಡ ವಿವಿಧ ಕ್ರಮಗಳ ಪರಿಣಾಮ, ಅಲ್ಲಿನ ಅಂತರ್ಜಲ ಮಟ್ಟ ಕೇವಲ ಮೂರು ವರ್ಷಗಳಲ್ಲಿ ಆರು ಮೀಟರ್‌ಗಳಷ್ಟು ಹೆಚ್ಚಾಗಿದೆ.

ಭಾರತದ ಹೆಚ್ಚಿನ ರಾಜ್ಯಗಳಲ್ಲಿ ನೀರಿನ ಸಮಸ್ಯೆ ಇದೆ. ಕ್ಷೀಣಿಸುತ್ತಿರುವ ಅಂತರ್ಜಲವು ಜಮೀನುಗಳು, ಕೈಗಾರಿಕೆಗಳು ಮತ್ತು ಕುಡಿಯುವ ನೀರಿನಂತಹ ಮೂಲಭೂತ ಅಗತ್ಯಗಳಿಗೆ ದೊಡ್ಡ ಅಪಾಯ ಎನಿಸಿದೆ. ತೆಲಂಗಾಣದ ಒಂದು ಜಿಲ್ಲೆಯಲ್ಲಿ ಅಂತರ್ಜಲ ಕೊರತೆಯನ್ನು ನಿವಾರಿಸಿ, ಅದನ್ನು ವೃದ್ಧಿಸುವ ಸವಾಲು ಕೈಗೆತ್ತಿಕೊಂಡು ಅದರಲ್ಲಿ ಅಧ್ಬುತ ಯಶಸ್ಸು ಸಾಧಿಸಿರುವ ಐಎಎಸ್ ಅಧಿಕಾರಿ ದೇವರಕೊಂಡ ಕೃಷ್ಣ ಭಾಸ್ಕರ್.

ಅವರು ಈ ಕುರಿತು ಮಾತನಾಡಿ, “ಜಿಲ್ಲೆಯ ನೀರಿನ ಕೊರತೆ ಎಂದಿಗೂ ಮುಗಿಯದ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ‌ ಮೊದಲಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳು ಅಥವಾ ಮಂಡಲಗಳನ್ನು ಬರಪೀಡಿತ ಅಥವಾ ಅರೆ ಬರಪೀಡಿತ ವರ್ಗದಲ್ಲಿ ಲೇಬಲ್ ಮಾಡಲಾಯಿತು” ಎಂದು ತಮ್ಮ ಯೋಜನೆಯ ಪ್ರಾರಂಭಿಕ ಹಂತವನ್ನು ವಿವರಿಸುತ್ತಾರೆ.

ನೀರಿನ ಕೊರತೆಯನ್ನು ನಿಭಾಯಿಸಲು, ಜಿಲ್ಲೆಯು ಹಳೆಯ ಕೆರೆ-ಕಟ್ಟೆಗಳನ್ನು ಪುನಶ್ಚೇತನಗೊಳಿಸುವುದು, ನೀರಿನ ಕೊರತೆ ಇರುವ ಕಡೆಗಳಲ್ಲಿ ಆಧುನಿಕ ಕೊಳವೆ ಬಾವಿ ಸ್ಥಾಪಿಸುವ ಕಾರ್ಯ ಪ್ರಾರಂಭಿಸಲಾಯಿತು. ಜಲಾಶಯಗಳಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಮುಗಿಸಲಾಯಿತು. ಅಸ್ತಿತ್ವದಲ್ಲಿದ್ದ ಜಲಮೂಲಗಳನ್ನು ಪುನಶ್ಚೇತನಗೊಳಿಸಲಾಯಿತು. ಹೊಸ ಇಂಗುಗುಂಡಿಗಳು, ಚೆಕ್ ಡ್ಯಾಂಗಳನ್ನು ಸಮರೋಪಾಧಿಯಲ್ಲಿ ತೋಡಿಸಲಾಯಿತು‌. ಆ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಇಂಗುವಿಕೆಯ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸಲಾಯಿತು.

ಹೀಗೆ ಅಂತರ್ಜಲ ಸಂರಕ್ಷಣೆ, ಅಭಿವೃದ್ಧಿಯ ಸಂಯೋಜಿತ ಪ್ರಯತ್ನಗಳನ್ನು ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಧಾನದೊಂದಿಗೆ ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಯಿತು. ಈ ಮೂಲಕ ಅಲ್ಲಿ ಅಂತರ್ಜಲ ಮಟ್ಟದಲ್ಲಿ ಗಮನಾರ್ಹ ಹೆಚ್ಚಳ ಸಾಧ್ಯವಾಯಿತು‌ ಎನ್ನುತ್ತಾರೆ.

Source: The Better India

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

2 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

11 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

12 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

12 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

19 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

24 hours ago