MIRROR FOCUS

ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಧಿಕಾರಿಯ ದಿಟ್ಟ ಕ್ರಮ | ಮೂರು ವರ್ಷದಲ್ಲಿ ಆರು ಮೀಟರ್ ಅಂತರ್ಜಲ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೆಲಂಗಾಣದ(Telangana) ರಾಜನ್ನ- ಸಿರಿಸಿಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ(DC) 2012 ನೇ ಸಾಲಿನ ಐಎಎಸ್ ಅಧಿಕಾರಿ(IAS officer) ಜಿಲ್ಲೆಯಾದ್ಯಂತ ಅಂತರ್ಜಲ(found water) ವೃದ್ಧಿಯಾಗಿ ಕೈಗೊಂಡ ವಿವಿಧ ಕ್ರಮಗಳ ಪರಿಣಾಮ, ಅಲ್ಲಿನ ಅಂತರ್ಜಲ ಮಟ್ಟ ಕೇವಲ ಮೂರು ವರ್ಷಗಳಲ್ಲಿ ಆರು ಮೀಟರ್‌ಗಳಷ್ಟು ಹೆಚ್ಚಾಗಿದೆ.

Advertisement

ಭಾರತದ ಹೆಚ್ಚಿನ ರಾಜ್ಯಗಳಲ್ಲಿ ನೀರಿನ ಸಮಸ್ಯೆ ಇದೆ. ಕ್ಷೀಣಿಸುತ್ತಿರುವ ಅಂತರ್ಜಲವು ಜಮೀನುಗಳು, ಕೈಗಾರಿಕೆಗಳು ಮತ್ತು ಕುಡಿಯುವ ನೀರಿನಂತಹ ಮೂಲಭೂತ ಅಗತ್ಯಗಳಿಗೆ ದೊಡ್ಡ ಅಪಾಯ ಎನಿಸಿದೆ. ತೆಲಂಗಾಣದ ಒಂದು ಜಿಲ್ಲೆಯಲ್ಲಿ ಅಂತರ್ಜಲ ಕೊರತೆಯನ್ನು ನಿವಾರಿಸಿ, ಅದನ್ನು ವೃದ್ಧಿಸುವ ಸವಾಲು ಕೈಗೆತ್ತಿಕೊಂಡು ಅದರಲ್ಲಿ ಅಧ್ಬುತ ಯಶಸ್ಸು ಸಾಧಿಸಿರುವ ಐಎಎಸ್ ಅಧಿಕಾರಿ ದೇವರಕೊಂಡ ಕೃಷ್ಣ ಭಾಸ್ಕರ್.

ಅವರು ಈ ಕುರಿತು ಮಾತನಾಡಿ, “ಜಿಲ್ಲೆಯ ನೀರಿನ ಕೊರತೆ ಎಂದಿಗೂ ಮುಗಿಯದ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ‌ ಮೊದಲಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳು ಅಥವಾ ಮಂಡಲಗಳನ್ನು ಬರಪೀಡಿತ ಅಥವಾ ಅರೆ ಬರಪೀಡಿತ ವರ್ಗದಲ್ಲಿ ಲೇಬಲ್ ಮಾಡಲಾಯಿತು” ಎಂದು ತಮ್ಮ ಯೋಜನೆಯ ಪ್ರಾರಂಭಿಕ ಹಂತವನ್ನು ವಿವರಿಸುತ್ತಾರೆ.

ನೀರಿನ ಕೊರತೆಯನ್ನು ನಿಭಾಯಿಸಲು, ಜಿಲ್ಲೆಯು ಹಳೆಯ ಕೆರೆ-ಕಟ್ಟೆಗಳನ್ನು ಪುನಶ್ಚೇತನಗೊಳಿಸುವುದು, ನೀರಿನ ಕೊರತೆ ಇರುವ ಕಡೆಗಳಲ್ಲಿ ಆಧುನಿಕ ಕೊಳವೆ ಬಾವಿ ಸ್ಥಾಪಿಸುವ ಕಾರ್ಯ ಪ್ರಾರಂಭಿಸಲಾಯಿತು. ಜಲಾಶಯಗಳಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಮುಗಿಸಲಾಯಿತು. ಅಸ್ತಿತ್ವದಲ್ಲಿದ್ದ ಜಲಮೂಲಗಳನ್ನು ಪುನಶ್ಚೇತನಗೊಳಿಸಲಾಯಿತು. ಹೊಸ ಇಂಗುಗುಂಡಿಗಳು, ಚೆಕ್ ಡ್ಯಾಂಗಳನ್ನು ಸಮರೋಪಾಧಿಯಲ್ಲಿ ತೋಡಿಸಲಾಯಿತು‌. ಆ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಇಂಗುವಿಕೆಯ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸಲಾಯಿತು.

Advertisement

ಹೀಗೆ ಅಂತರ್ಜಲ ಸಂರಕ್ಷಣೆ, ಅಭಿವೃದ್ಧಿಯ ಸಂಯೋಜಿತ ಪ್ರಯತ್ನಗಳನ್ನು ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಧಾನದೊಂದಿಗೆ ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಯಿತು. ಈ ಮೂಲಕ ಅಲ್ಲಿ ಅಂತರ್ಜಲ ಮಟ್ಟದಲ್ಲಿ ಗಮನಾರ್ಹ ಹೆಚ್ಚಳ ಸಾಧ್ಯವಾಯಿತು‌ ಎನ್ನುತ್ತಾರೆ.

Advertisement

Source: The Better India

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

3 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

3 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

3 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

24 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago