ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಮತ್ತು ಬಾಬಿ ಫಿಶರ್ ಚೆಸ್ ಅಸೋಸಿಯೇಷನ್ (ರಿ) ಇದರ ಆಶ್ರಯದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಡಿ.16 ರಂದು ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ನಡೆಯಲಿದೆ.…..ಮುಂದೆ ಓದಿ….
ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಕಿರಿಯ ಪ್ರಾಥಮಿಕ ವಿಭಾಗ (1ರಿಂದ 5ನೇ ತರಗತಿ ) ಹಿರಿಯ ಪ್ರಾಥಮಿಕ ವಿಭಾಗ (6 ರಿಂದ 8 ನೇ ತರಗತಿ ) ಮತ್ತು ಪ್ರೌಢ ಹಾಗೂ ಪದವಿಪೂರ್ವ ವಿಭಾಗ (9 ರಿಂದ 12ನೇ ತರಗತಿ) ದಲ್ಲಿ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಪ್ರಥಮ ಮೂರು ಸ್ಥಾನ ವಿಜೇತರಿಗೆ ನಗದು ಬಹುಮಾನ ಮತ್ತು ಉತ್ತಮ 5 ಸ್ಥಾನ ಪಡೆದವರಿಗೆ ಟ್ರೋಫಿಯನ್ನು ನೀಡಲಾಗುವುದು. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಸ್ವತಃ ಚೆಸ್ ಬೋರ್ಡ್ ಹಾಗೂ ಶಾಲಾ ಐ. ಡಿ. ಕಾರ್ಡ್ ಅಥವಾ ಗುರುತಿನ ಪತ್ರ ಅನ್ನು ತರುವುದು. ಈ ಪಂದ್ಯಾಟಕ್ಕೆ ಪ್ರವೇಶ ಶುಲ್ಕವಿದ್ದು ಪ್ರಾಥಮಿಕ ಶಾಲಾ ವಿಭಾಗ 200 ರೂಪಾಯಿ ಮತ್ತು ಹೈಸ್ಕೂಲ್ ಹಾಗೂ ಪದವಿ ಪೂರ್ವ ವಿಭಾಗಕ್ಕೆ ರೂಪಾಯಿ 300 ಆಗಿರುತ್ತದೆ. ಭಾಗವಹಿಸುವ ಸ್ಪರ್ಧಿಗಳು ದಿನಾಂಕ 13.12.2024ರ ಮೊದಲು ಹೆಸರು ನೋಂದಾಯಿಸಬೇಕೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…