ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಮತ್ತು ಬಾಬಿ ಫಿಶರ್ ಚೆಸ್ ಅಸೋಸಿಯೇಷನ್ (ರಿ) ಇದರ ಆಶ್ರಯದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಡಿ.16 ರಂದು ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ನಡೆಯಲಿದೆ.…..ಮುಂದೆ ಓದಿ….
ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಕಿರಿಯ ಪ್ರಾಥಮಿಕ ವಿಭಾಗ (1ರಿಂದ 5ನೇ ತರಗತಿ ) ಹಿರಿಯ ಪ್ರಾಥಮಿಕ ವಿಭಾಗ (6 ರಿಂದ 8 ನೇ ತರಗತಿ ) ಮತ್ತು ಪ್ರೌಢ ಹಾಗೂ ಪದವಿಪೂರ್ವ ವಿಭಾಗ (9 ರಿಂದ 12ನೇ ತರಗತಿ) ದಲ್ಲಿ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಪ್ರಥಮ ಮೂರು ಸ್ಥಾನ ವಿಜೇತರಿಗೆ ನಗದು ಬಹುಮಾನ ಮತ್ತು ಉತ್ತಮ 5 ಸ್ಥಾನ ಪಡೆದವರಿಗೆ ಟ್ರೋಫಿಯನ್ನು ನೀಡಲಾಗುವುದು. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಸ್ವತಃ ಚೆಸ್ ಬೋರ್ಡ್ ಹಾಗೂ ಶಾಲಾ ಐ. ಡಿ. ಕಾರ್ಡ್ ಅಥವಾ ಗುರುತಿನ ಪತ್ರ ಅನ್ನು ತರುವುದು. ಈ ಪಂದ್ಯಾಟಕ್ಕೆ ಪ್ರವೇಶ ಶುಲ್ಕವಿದ್ದು ಪ್ರಾಥಮಿಕ ಶಾಲಾ ವಿಭಾಗ 200 ರೂಪಾಯಿ ಮತ್ತು ಹೈಸ್ಕೂಲ್ ಹಾಗೂ ಪದವಿ ಪೂರ್ವ ವಿಭಾಗಕ್ಕೆ ರೂಪಾಯಿ 300 ಆಗಿರುತ್ತದೆ. ಭಾಗವಹಿಸುವ ಸ್ಪರ್ಧಿಗಳು ದಿನಾಂಕ 13.12.2024ರ ಮೊದಲು ಹೆಸರು ನೋಂದಾಯಿಸಬೇಕೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…