Advertisement
ಸುದ್ದಿಗಳು

ಕಾಡಿನ ಜನರ ಕಲ್ಯಾಣಕ್ಕೆ ನಿಂತ ಡಿವೈನ್ ಸ್ಟಾರ್ | ಸಿಎಂ ಎದುರು 20 ಬೇಡಿಕೆಯಿಟ್ಟ ರಿಷಬ್ ಶೆಟ್ಟಿ |

Share

ಕಾಂತಾರ ಸಿನಿಮಾ ವಿಶ್ವಮಟ್ಟದಲ್ಲಿ ನಮ್ಮ ತುಳುನಾಡ ಸಂಸ್ಕೃತಿಯನ್ನು ಎಲ್ಲರು ಬೆರಗುಗಣ್ಣಿನಿಂದ ನೋಡುವಂತೆ ಮಾಡಿತ್ತು.. ಭಾರೀ ದೊಡ್ಡ ಸಾಧನೆಯನ್ನು ಮಾಡಿದ್ದ ಕಾಂತಾರ ಸಿನಿಮಾಕ್ಕೆ ನಿರ್ದೆಶಕ, ನಟ ರಿಷಭ್ ಶೆಟ್ಟಿ ಅವರಿಗೆ ಸಾಲು ಸಾಲು ಪ್ರಶಸ್ತಿಗಳು ದಕ್ಕಿದ್ದವು. ಸದ್ಯ ಕಾಂತಾರ 2 ರಲ್ಲಿ ಬ್ಯುಸಿಯಾಗಿರುವ ರಿಷಭ್ ಶೆಟ್ಟಿ ಇದರ ಜೊತೆಯಲ್ಲಿ ಸಾಮಾಜಿಕ ಕಾರ್ಯಕ್ಕೂ ಮುಂದಾಗಿದ್ದಾರೆ. ಕಾಂತಾರ ಸಿನಿಮಾದ ಬಳಿಕ ದೈವ ನರ್ತಕರಿಗೆ ಮಾಸಿಕ 2 ಸಾವಿರ ರೂಪಾಯಿ ಮಾಸಾಶನ ದೊರಕಿತ್ತು. ಇದೀಗ ಅರಣ್ಯದಂಚಿನ ಜನರ ಬದುಕನ್ನು ಹಸನು ಮಾಡಲು ರಿಷಭ್ ಶೆಟ್ಟಿ ಕೈ ಜೋಡಿಸಿದ್ದಾರೆ.

Advertisement

ಕಾಂತಾರ ಸಿನಿಮಾದಿಂದ ಸ್ಫೂರ್ತಿ ಪಡೆದುಕೊಂಡ ರಿಷಭ್ ಶೆಟ್ಟಿ ಕಾಡು ಅಂಚಿನ ಜನರ ಕಷ್ಟಗಳನ್ನು ಆಲಿಸಿದ್ದಾರೆ. ಅಷ್ಟೇ ಏಕೆ ಈ ಸಂಬಂಧ 20 ಅಂಶಗಳನ್ನು ಪಟ್ಟಿ ಮಾಡಿಕೊಂಡು ರಿಷಭ್ ಶೆಟ್ಟಿ, ಸಿಎಂ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ. ಈ ಮೂಲಕ ಕಾಡು ಮಕ್ಕಳ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ಹಾಗೂ ಈ ಸಂಬಂಧ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಸಿನಿಮಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಾಡಿನ ಜನರ ಜೊತೆ ಬೆರೆಯುತ್ತಾ ರಿಷಭ್ ಶೆಟ್ಟಿ ಕಾಡಿನ ಜನರ ಕಷ್ಟಗಳ ಬಗ್ಗೆ ಅರಿತುಕೊಂಡಿದ್ದಾರೆ. ಕಾಡಾನೆಗಳ ಸಮಸ್ಯೆ., ಕಾಡ್ಗಿಚ್ಚು ಸಂಭವಿಸಿದಾಗ ಸಿಂಬದಿಗಳು ತಮ್ಮ ಜೀವವನ್ನೇ ಪಣಕ್ಕಿಡುವ ರೀತಿ ಹೀಗೆ ಸಾಕಷ್ಟು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿರುವ ಖ್ಯಾತ ನಿರ್ದೇಶಕ ರಿಷಭ್ ಶೆಟ್ಟಿ ಇದಕ್ಕೆಲ್ಲಾ ಒಂದು ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿ ಅವರಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಹಾಗೆ ಇದಕ್ಕೆ ಸ್ಪಂದಿಸಿರುವ ಸಿಎಂ ಅವರು ರಿಷಬ್ ಶೆಟ್ಟಿಯವರ ಮನವಿಯನ್ನು ಆದಷ್ಟು ಬೇಗ ಗಣನೆಗೆ ತೆಗೆದುಕೊಂಡು, ಕಾಡು ಅಂಚಿನ ಜನರ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

13 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

14 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

22 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

23 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 days ago