700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

August 5, 2025
8:05 AM

ದ ರೂರಲ್‌ ಮಿರರ್.ಕಾಂ ನಲ್ಲಿ “ಹೊಸರುಚಿ” ಯ ಮೂಲಕ ಹಲಸು ಅಡುಗೆಯ ಮೂಲಕ ಗಮನ ಸೆಳೆದಿದ್ದು ದಿವ್ಯ ಮಹೇಶ್‌ ಅವರಿಗೆ “ಪಾಕಪ್ರವೀಣೆ” ಎಂಬ ಪ್ರಶಸ್ತಿ ಈಚೆಗೆ ಲಭ್ಯವಾಗಿದೆ. “ಆಹಾರಸ್ನೇಹಿ” ಎಂಬ ಪೇಜಿನಲ್ಲಿ 700 ಕ್ಕೂ ಮಿಕ್ಕಿದ ವಿವಿಧ ಅಡುಗೆ ತಯಾರಿಯ ಬಗ್ಗೆ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ನಮ್ಮ ಅಡುಗೆ ಅರಮನೆ ಪೇಜ್ ನಲ್ಲಿ ಕೂಡಾ 800 ಕ್ಕು ಅಧಿಕ ರೆಸಿಪಿ ಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ವಿವಿಧ ಬಗೆಯ ಅಡುಗೆಯ ಮೂಲಕ ಗಮನಸೆಳೆದಿರುವ ದಿವ್ಯ ಮಹೇಶ್‌ ಅವರಿಗೆ ಫುಡ್ ಡೆಕೋರೇಟಿವ್ ರಾಣಿ, ಉತ್ತಮ ಸಾರಥಿ , ಜಾಗೇರಿ ಕಾಂ, ನೆಸ್ಲೇ ಕಂಪನಿ , ಹಾಗೇ ಹಲಸಿನ ರೆಸಿಪಿ ಪೋಸ್ಟ್ ನಲ್ಲಿ ಕೂಡ ಬಹುಮಾನ ಗಳು ಲಭಿಸಿವೆ. ದ ರೂರಲ್‌ ಮಿರರ್.ಕಾಂ ನಲ್ಲಿ ಕಳೆದ ಸುಮಾರು 50 ದಿನಗಳಿಂದ ಹಲಸು ಅಡುಗೆ ಮನೆಗೆ ಎಂಬ ವಿಷಯದ ಹಿನ್ನೆಲೆಯಲ್ಲಿ ನಿರಂತರವಾಗಿ ಹಲಸು ರೆಸಿಪಿಗಳನ್ನು ಬರೆಯುತ್ತಿದ್ದಾರೆ. ಎಳೆ ಹಲಸು, ಹಲಸು, ಹಲಸಿನ ಹಣ್ಣು, ಹಲಸಿನ ಬೀಜ, ನೀರುಸೊಳೆ ಹೀಗೆ ಹಲಸು ಅಡುಗೆ ಮನೆಗೆ ಪ್ರವೇಶಿಸುವ ಹಾಗೂ ಆಹಾರವಾಗಿ ಹೇಗೆಲ್ಲಾ ಬಳಕೆ ಮಾಡಬಹುದು ಎಂಬುದರ ಬಗ್ಗೆ ಬರೆಯುತ್ತಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror