ದೀಪಾವಳಿ | ಪಟಾಕಿ ಅವಘಡದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು

October 31, 2024
6:45 AM
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.

ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ. 

ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು  ಆಸ್ಪತ್ರೆಯ ನಿರ್ದೇಶಕ ಡಾ.  ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ  7498809105,  9994584495 ಗೆ ಕರೆ ಮಾಡಬಹುದಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror