MIRROR FOCUS

ದೀಪಾವಳಿ | ಪಟಾಕಿ ಅವಘಡದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ. 

Advertisement
Advertisement

ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು  ಆಸ್ಪತ್ರೆಯ ನಿರ್ದೇಶಕ ಡಾ.  ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ  7498809105,  9994584495 ಗೆ ಕರೆ ಮಾಡಬಹುದಾಗಿದೆ.

 

 

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

12 minutes ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

9 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

10 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

10 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

10 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

16 hours ago