ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ.
ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ 7498809105, 9994584495 ಗೆ ಕರೆ ಮಾಡಬಹುದಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…