ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ.
ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ 7498809105, 9994584495 ಗೆ ಕರೆ ಮಾಡಬಹುದಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…