ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ.
ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ 7498809105, 9994584495 ಗೆ ಕರೆ ಮಾಡಬಹುದಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…