MIRROR FOCUS

ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್‌ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ. 

Advertisement

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.  ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ  ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.

ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ  ದೀಪಗಳನ್ನು  ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ  ಎನ್ನುತ್ತಾರೆ ಸುಮಿತ್ರಾ.

ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

2 hours ago

ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…

3 hours ago

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…

3 hours ago

ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…

3 hours ago

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ

ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…

3 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…

10 hours ago