ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ. ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.
ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ ದೀಪಗಳನ್ನು ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ ಎನ್ನುತ್ತಾರೆ ಸುಮಿತ್ರಾ.
ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…