ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ. ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.
ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ ದೀಪಗಳನ್ನು ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ ಎನ್ನುತ್ತಾರೆ ಸುಮಿತ್ರಾ.
ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…