ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ. ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.
ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ ದೀಪಗಳನ್ನು ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ ಎನ್ನುತ್ತಾರೆ ಸುಮಿತ್ರಾ.
ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…