Advertisement
MIRROR FOCUS

ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

Share

ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್‌ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ. 

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.  ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ  ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.

ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ  ದೀಪಗಳನ್ನು  ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ  ಎನ್ನುತ್ತಾರೆ ಸುಮಿತ್ರಾ.

ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

5 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

14 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago