ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ. ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.
ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ ದೀಪಗಳನ್ನು ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ ಎನ್ನುತ್ತಾರೆ ಸುಮಿತ್ರಾ.
ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…