ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ. ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.
ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ ದೀಪಗಳನ್ನು ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ ಎನ್ನುತ್ತಾರೆ ಸುಮಿತ್ರಾ.
ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…