Advertisement
MIRROR FOCUS

ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

Share

ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್‌ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ. 

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.  ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ  ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.

ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ  ದೀಪಗಳನ್ನು  ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ  ಎನ್ನುತ್ತಾರೆ ಸುಮಿತ್ರಾ.

ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

54 minutes ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

8 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

19 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

23 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago