Advertisement
MIRROR FOCUS

ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

Share

ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್‌ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ. 

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.  ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ  ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.

ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ  ದೀಪಗಳನ್ನು  ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ  ಎನ್ನುತ್ತಾರೆ ಸುಮಿತ್ರಾ.

ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 hour ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

2 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

2 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

2 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

13 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

17 hours ago