Advertisement
MIRROR FOCUS

#DakshinaKannada | ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ | ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Share

ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು.

ಮುಲ್ಲೈ ಮುಗಿಲನ್, ದ ಕ ಜಿಲ್ಲಾಧಿಕಾರಿ

ಅವರು ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ, ಅದನ್ನ ಉಲ್ಲಂಘಿಸಿದ್ದಲ್ಲೀ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಜಿಲ್ಲೆಯ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ನೀರು ಹರಿಯುತ್ತಿರುವ ಸ್ಥಳಗಳಿಗೆ ಪ್ರವೇಶ ನಿರ್ಬಂಧ ಬಗ್ಗೆ ಸೂಚನೆ ನೀಡುವಂತೆ ತಿಳಿಸಿದ್ದು, ಅದನ್ನು ಮೀರುವಂತಿಲ್ಲ. ಚಾರಣೀಗರು ನಿಷೇಧಿತ ಸ್ಥಳಗಳಲ್ಲಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜುರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳನ್ನು ಪ್ರಾಕೃತಿಕ ವಿಕೋಪಕ್ಕೆ ಒಳಗಾಗುವ ಅಪಾಯಕಾರಿ ಪ್ರದೇಶಗಳು ಎಂದು ಗುರುತಿಸಲಾಗಿದ್ದು, ಅದರೊಂದಿಗೆ ಜಿಲ್ಲೆಯೊಳಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ 87 ಸ್ಥಳಗಳನ್ನು ಅಪಾಯ ಸ್ಥಳಗಳೆಂದು ಗುರುತಿಸಲಾಗಿದೆ,  ಚಾರ್ಮಾಡಿ ಘಾಟಿಯಲ್ಲಿಗೆ 34 ಕಡೆಗಳಲ್ಲಿ ಅಪಾಯ ಸ್ಥಳಗಳನ್ನು ಗುರುತಿಸಲಾಗಿದೆ, ಅಪಾಯಕಾರಿ ಸಂದರ್ಭ ಎದುರಾಗುವಾಗ ಅಲ್ಲಿ ಸಾರ್ವಜನಿಕರು, ಪ್ರಯಾಣಿಕರು ತೆರಳಬಾರದು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 25 ಎನ್‍ಡಿಆರ್‍ಎಫ್, 38 ಎಸ್‍ಡಿಆರ್‍ಎಫ್, 190 ಅಗ್ನಿಶಾಮಕ ದಳ ಹಾಗೂ 76 ಜನ ಗೃಹ ರಕ್ಷಕ ದಳ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ, ಜಿಲ್ಲೆಯಲ್ಲಿ ಪ್ರತೀ ಗ್ರಾಮ ಮಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆಯಲ್ಲಿ ವಾರ್ಡ್ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕೇಂದ್ರಗಳನ್ನು ತೆರೆಯಲಾಗಿದೆ. ಅದಕ್ಕೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅಲ್ಲಿ ಏನಾದರೂ ಅಪಾಯ ಸಂಭವಿಸಿದಲ್ಲಿ ನೋಡಲ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಕ್ರಮ ಕೈಗೊಳ್ಳಲಿದ್ದಾರೆ. ಹೆಚ್ಚಿನ ಕ್ರಮ ಜರುಗಬೇಕಾಗಿದ್ದಲ್ಲಿ ತಹಶೀಲ್ದಾರರ್‍ಗೆ ಅವರು  ತಿಳಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯಾಧ್ಯಂತ 34 ಕಂಟ್ರೋಲ್ ರೂಂ. ತೆರೆಯಲಾಗಿದ್ದು, ಅವರಿಗೆ ಕರೆ ಮಾಡುವಂತೆ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ, ಹೊರಗಿನಿಂದ ಜಿಲ್ಲೆಯ ದೇವಸ್ಥಾನಕ್ಕೆ ಬರುವವರು ಸಾಕಷ್ಟು ಜಾಗೃತಿ ವಹಿಸಬೇಕಾಗಿದೆ. ಅಗತ್ಯವಿದ್ದರೆ ಮಾತ್ರ ಬರುವುದು ಸೂಕ್ತ. ಈಗಾಗಲೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಂತಹ 2 ರಸ್ತೆಗಳು ಮುಚ್ಚಲಾಗಿದೆ. ರಸ್ತೆ ತಡೆ ಉಂಟಾದಲ್ಲಿ ಸಮಸ್ಯೆಯಾಗಲಿದೆ. ಹೊರಗಿನಿಂದ ಬರುವವರು ನೀರಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‍ದೀಪ್ ಕುಮಾರ್ ಜೈನ್ ಮಾತನಾಡಿ, ಹೊರ ಜಿಲ್ಲೆಯಿಂದ ಇಲ್ಲಿಗೆ ಬರುವವರು ಮಳೆ ಸಂದರ್ಭದಲ್ಲಿ ಗೂಗಲ್ ಮ್ಯಾಪ್ ಬಳಸುವುದು ಸೂಕ್ತ. ಯಾವ ರಸ್ತೆಯನ್ನು ಮುಚ್ಚಿದೆ, ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ತನಕ ಮುಚ್ಚಲಾಗುವುದು ಎಂಬ ಮಾಹಿತಿ ಲಭಿಸಲಿದೆ, ಇದರಿಂದ ಅವರ ಪ್ರಯಾಣಕ್ಕೆ ಅನುಕೂಲವಾಗುವುದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

9 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

13 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

13 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

23 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

24 hours ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…

1 day ago